ಲಾಗಿನ್
CenturyTV
ತಾಜಾ ಸುದ್ದಿ
ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು
ರಾಜ್ಯ

ಪರಿಸರ ಪ್ರಜ್ಞೆ ಇರುವ ವಿದ್ಯಾರ್ಥಿ, ಜವಾಬ್ದಾರಿಯುತ ನಾಗರಿಕನಾಗುತ್ತಾನೆ

sh
ವರದಿ: shashikala ಸ್ಥಳ: ವಿಶೇಷ ಪ್ರತಿನಿಧಿ
ಓದುವ ಸಮಯ: 0 ನಿಮಿಷ ಪ್ರಕಟಣೆ: Jun 08, 2026 660
ಹಂಚಿಕೊಳ್ಳಿ
ಪರಿಸರ ಪ್ರಜ್ಞೆ ಇರುವ ವಿದ್ಯಾರ್ಥಿ, ಜವಾಬ್ದಾರಿಯುತ ನಾಗರಿಕನಾಗುತ್ತಾನೆ
ಅಕ್ಷರದ ಗಾತ್ರ:

ಶ್ರೀರಂಗಪಟ್ಟಣ ತಾಲೂಕು ಅಚ್ಚಪ್ಪನಕೊಪ್ಪಲು ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು “ಪ್ರಕೃತಿ ರಕ್ಷಣಾ ಪ್ರತಿಜ್ಞೆ” ಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವುದರ ಮುಖಾಂತರ ಉದ್ಘಾಟಿಸಿ,ವಿಶ್ವ ಪರಿಸರ ದಿನ ಅಂದರೆ ಜೂನ್ 5 ಕೇವಲ ಒಂದು ದಿನವಲ್ಲ. ಅದು ನಮಗೆ ಪ್ರಕೃತಿ ಕೊಟ್ಟ ಎಚ್ಚರಿಕೆ ಪತ್ರ. ಶಾಲೆ ಆವರಣಗಳಲ್ಲಿ ಗಿಡ ನೀಡುವುದು,ಪರಿಸರ ಸಂರಕ್ಷಣೆ ಕಾರ್ಯಗಳನ್ನು ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಪರಿಸರ ಪ್ರಜ್ಞೆ ಇರುವ ವಿದ್ಯಾರ್ಥಿ,ಜವಾಬ್ದಾರಿಯುತ ನಾಗರಿಕನಾಗುತ್ತಾನೆ ಎಂದು ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್ ಹೇಳಿದರು.

ಪರಿಸರ ಸಂರಕ್ಷಣೆ ಈಗಿನ ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ ಮುಖ್ಯವಾಗಬೇಕು. ಆಟ ಪಾಠಗಳ ಜೊತೆಗೆ ಪ್ರಾಯೋಗಿಕ ಕೆಲಸ. ಗಿಡ ನೆಡುವುದು, ಕಸ ವಿಂಗಡಿಸುವುದು, ನೀರು ಉಳಿಸುವುದು, ಪರಿಸರವನ್ನು ಒಂದು ವಿಷಯ ಅಲ್ಲ, ಒಂದು ಅಭ್ಯಾಸವಾಗಿ ನೋಡಿ.ವಿಜ್ಞಾನ, ಸಾಮಾಜಿಕ ಶಾಸ್ತ್ರದ ಪಾಠವನ್ನು ನಿಜ ಜೀವನದಲ್ಲಿ ಪ್ರಯೋಗಿಸುವ ಅವಕಾಶ ಸಿಗುತ್ತದೆ. ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಶಾಲಾ ಆವರಣದಲ್ಲಿ ಹೂ ಮತ್ತು ಹಣ್ಣಿನ ಸಸಿಗಳನ್ನು ನೆಡಲಾಯಿತು.


ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕೆ. ಎಂ.ವರಲಕ್ಷ್ಮಿ, ಸಹ ಶಿಕ್ಷಕಿಯರಾದ ಶ್ರೀಮತಿ ಎಂ ಅನುಪಮ, ಶ್ರೀಮತಿ ಎಲ್ ಅನಿತ, ಸಹ ಶಿಕ್ಷಕ ಮೋಹನ್, ಎಸ್ ಡಿ ಎಂ ಸಿ ಉಪ ಅಧ್ಯಕ್ಷೆ ಶ್ರೀಮತಿ ಭವ್ಯ, ಅಂಗನವಾಡಿ ಕಾರ್ಯಕರ್ತೆ ಪ್ರೇಮಕುಮಾರಿ, ರೈತ ಹೋರಾಟಗಾರ ನದೀಮ್, ಪದ್ಮ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿ ಹಂಚಿಕೊಳ್ಳಿ:
ಪ್ರಾಯೋಜಿತ ಜಾಹೀರಾತು

ವೆಬ್‌ಸೈಟ್ ಅಭಿವೃದ್ಧಿ ಸೇವೆಗಳು - R Techub

ಸುದ್ದಿ ಪೋರ್ಟಲ್, ಇ-ಕಾಮರ್ಸ್ ಮತ್ತು ಬಿಸಿನೆಸ್ ವೆಬ್‌ಸೈಟ್‌ಗಳ ವಿನ್ಯಾಸಕ್ಕಾಗಿ ಇಂದೇ ಸಂಪರ್ಕಿಸಿ.

ಸಂಪರ್ಕಿಸಿ: 8095556363
footer ad
ಚಾಟ್ ಮಾಡಿ